Marikamba Jatre In Sirsi : Dignitaries Visits Marikamba Temple In Karwar | Vijay Karnataka

Описание к видео Marikamba Jatre In Sirsi : Dignitaries Visits Marikamba Temple In Karwar | Vijay Karnataka

ಗದ್ದುಗೆಯಲ್ಲಿ ವಿರಾಜಮಾನಳಾದ ಜಾತ್ರಾ ಗದ್ದುಗೆಯಲ್ಲಿ ವಿರಾಜಮಾನಳಾಗಿರುವ ಶಿರಸಿಯ ಶ್ರೀ ಮಾರಿಕಾಂಬೆಯ ದರ್ಶನಕ್ಕೆ ಜನಸಾಗರವೇ ಹರಿದುಬರುತ್ತಿದೆ. ಲಕ್ಷಾಂತರ ಜನ ಪ್ರತಿದಿನವೂ ಇಲ್ಲಿಗೆ ಭೇಟಿ ನೀಡುತ್ತಿದ್ದು, ಅನೇಕ ಗಣ್ಯರು ಕೂಡ ಭೇಟಿ ನೀಡಿ ದೇವಿಯ ದರ್ಶನ ಪಡೆಯುತ್ತಿದ್ದಾರೆ.

ಶಿರಸಿ- ಸಿದ್ದಾಪುರ ಕ್ಷೇತ್ರದ ಶಾಸಕರೂ ಆಗಿರುವ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಅನಂತಕುಮಾರ ಹೆಗಡೆ, ಯಲ್ಲಾಪುರ- ಮುಂಡಗೋಡ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ಉತ್ತರಕನ್ನಡ ಜಿಲ್ಲಾ ಉಸ್ತುವಾರಿಯೂ ಆಗಿರುವ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಗದ್ದುಗೆಗೆ ಭೇಟಿ ನೀಡಿ ತಾಯಿ ಮಾರಿಕಾಂಬೆಯ ದರ್ಶನ ಪಡೆದರು.

ಗದ್ದುಗೆಯಲ್ಲಿ ಕುಳಿತಿರುವ ಮಾರಿಕಾಂಬೆಯ ದರ್ಶನ ಪಡೆಯುತ್ತಿರುವವರಲ್ಲಿ ಹೆಚ್ಚಿನ ಜನ ದೇವಿಗೆ ಪ್ರಿಯವಾದ ಉಡಿ ಸೇವೆ ನೀಡಿ ಹರಕೆ ಸಲ್ಲಿಸುತ್ತಿದ್ದಾರೆ. ಇನ್ನು ಮಾ.23ರವರೆಗೂ ಇಲ್ಲಿ ಜಾತ್ರಾ ವೈಭವ ಕಣ್ತುಂಬಿಕೊಳ್ಳಬಹುದಾಗಿದ್ದು, ಜಾತ್ರೆಯ ಕೊನೆಯ ದಿನವಾದ ಮಾ.23ರಂದು ಗದ್ದುಗೆಯಿಂದ ದೇವಿ ಏಳುವ ಮೂಲಕ ಒಂಭತ್ತು ದಿನಗಳ ಜಾತ್ರಾ ಮಹೋತ್ಸವ ಸಂಪನ್ನಗೊಳ್ಳಲಿದೆ. ದರ್ಶನಕ್ಕೆ ಜನಸಾಗರ!

#Karwar #MarkiambaJatre #Devotees

Our Website : https://Vijaykarnataka.com
Facebook:   / vijaykarnataka  
Twitter:   / vijaykarnataka  

Комментарии

Информация по комментариям в разработке